ಕರೋನಾ ಎರಡನೇ ಅಲೆಗೆ ತತ್ತರಿಸಿದ್ದ ಕರ್ನಾಟಕ ಹಂತ ಹಂತವಾಗಿ ಸಹಜ ಸ್ಥಿತಿಗೆ ಮರಳಿದೆ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮರು ಪ್ರಾರಂಭವಾಗಿ ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ಶಾಲಾ – ಕಾಲೇಜುಗಳಿಗೆ ಬರುತ್ತಿರುವುದು ಸಂತೋಷದ ಸಂಗತಿ. ಆದರೆ ಭೌತಿಕ ತರಗತಿಗಳು ಆರಂಭಗೊAಡ ಬಳಿಕ ವಿದ್ಯಾರ್ಥಿಗಳಿಗೆ ಕೆಲವೊಂದು ಸಮಸ್ಯೆಗಳು ಉಧ್ಬವಿಸುತ್ತಿರುವುದು ಶೋಚನಿಯ. ಕೆಳಗೆ ಉಲ್ಲೇಖಿಸಿದ ಪ್ರಮುಖ ಅಂಶಗಳನ್ನು ರಾಜ್ಯ ಸರಕಾರ ಇತ್ಯರ್ಥಗೊಳಿಸಬೇಕೆಂದು ಅಭಾವಿಪ ಒತ್ತಾಯಿಸುತ್ತದೆ.
೧) ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್ ಸೇವೆ ಪುನರಾರಂಭಿಸಿ.
ಶಾಲಾ-ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಹಾಗೂ ಲಾಕ್ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ. .ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ, ಸಾರಿಗೆ ಇಲಾಖೆಯು ತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಆರಂಭಿಸಬೇಕು, ಹಾಗೂ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿದರು ಸಹಿತ ಸಿಬ್ಬಂಧಿಗಳ ಕೊರತೆಯಿಂದಾಗಿ ತಡವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದೊರೆಯುತ್ತಿದೆ ಈ ಸಮಸ್ಯೆಯನ್ನು ಸರಿಪಡಿಸಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಕ್ಷಣವೇ ಬಸ್ ಪಾಸ್ ನೀಡುವಂತೆ ಎಬಿವಿಪಿ ಆಗ್ರಹಿಸುತ್ತದೆ.
೨) ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ.
ಡಿಪ್ಲೋಮಾ ಇಂಜಿನಿಯರಿAಗ್, ಸ್ನಾತಕ – ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ.ಎಚ್.ಡಿ ಮಾಡುತ್ತಿರುವ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಮತು ್ತಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕೆಂದು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಗೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರಕಾರಕ್ಕೆ ಆಗ್ರಹಿಸುತ್ತದೆ.
೩) ವಸತಿ ನಿಲಯಕ್ಕೆ ಹೊಸದಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕಿಯೆಯನ್ನು ಕೂಡಲೇ ಪೂರ್ಣಗೊಳಿಸಿ.
ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲಗಳಿಗೆ ಅವಲಂಬಿತರಾಗಿದ್ದಾರೆ, ಹೊಸದಾಗಿ ಶಾಲಾ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿಗಳು ಆರಂಭವಾಗಿವೆ, ಆದರೂ ಸಹಿತ ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕಿಯ ಮುಗಿಯದೇ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರವೂ ತಕ್ಷಣವೇ ಸಂಬAದಪಟ್ಟ ಅಧಿಕಾರಿಗಳಿಗೆ ವಸತಿ ನಿಲಯಗಳ ಆಯ್ಕೆ ಪ್ರಕಿಯೆಯನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡುವಂತೆ ಎಬಿವಿಪಿ ಒತ್ತಾಯಿಸುತ್ತದೆ. ರಾಜ್ಯದ ಹಿಂದುಳಿದ ವರ್ಗ, ಸಮಾಜಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಗಳ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಸಂಖ್ಯೆಗೆ ಮತ್ತು ವಸತಿ ನಿಲಯಗಳಿಗೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ತುಂಬಾ ಅಂತರವಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರ ತಕ್ಷಣಕ್ಕೆ ವಸತಿನಿಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು. ಪ್ರಸಕ್ತ ವರ್ಷದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್ ಗಳನ್ನು ತೆರೆಯಬೇಕಿದೆ ಮತ್ತು ಹಾಸ್ಟೆಲ್ ಗಳಲ್ಲಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಎಬಿವಿಪಿ ಒತ್ತಾಸುತ್ತದೆ.
ಈ ಸಂದರ್ಭದಲ್ಲಿ ವಿನೋದ ಬಿರಾದಾರ, ರಘು ಲಗಳಿ, ಪ್ರದೀಪ ಬಡಿಗೇರ, ರವಿ ಪಡಸಲಗಿ, ಸಚೀನ ನ್ಯಾಮಗೌಡ, ಸಿದ್ದು ನ್ಯಾಮಗೌಡ, ಪುಂಡಲೀಕ ಪೂಜೇರಿ, ಸುನೀಲ ಕಾಡದೇವರಮಠ, ರಾಜು ಹವಾಲ್ದಾರ, ಪಜ್ಜು ಬಡಿಗೇರ, ಅಮೀತ ಬಾಡಗಿ, ಸುದೀಪ ರಾಳೆ, ಸಚೀನ ಮನಗೂಳಿ, ಪವನ ಹಿರೇಮಠ ಇತರರು ಉಪಸ್ಥಿತರಿದ್ದರು.