ಡಾ.ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಯ: ಶೋಕಸಾಗರದಲ್ಲಿ ಭಕ್ತರು
ಡಾಅಭಿನವಅನ್ನದಾನಸ್ವಾಮೀಜಿ.
ಗದಗ ಜಿಲ್ಲೆಯ ಹಾಲಕೇರಿ ಶ್ರೀ ಅನ್ನದಾನೇಶ್ವರ ಮಠದ ಅಭಿನವ ಅನ್ನದಾನೇಶ್ವರ ಪರಮಪೂಜ್ಯ ಶ್ರೀ ಡಾ.ಸಂಗನಬಸವ ಸ್ವಾಮೀಜಿಗಳು ಲಿಂಗೈಕ್ಯರಾಗಿರುವುದು ತೀವ್ರ ನೋವು ತಂದಿದೆ. ಇದು ರಾಜ್ಯದ ಆಧ್ಯಾತ್ಮಿಕ, ಸಾಮಾಜಿಕ ಕ್ಷೇತ್ರಕ್ಕಾದ ದೊಡ್ಡ ನಷ್ಟ. 128 ಶಾಖಾ ಮಠ, 60ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಅವರು ಸಮಾಜಕ್ಕೆ ಅವಿರತ ಸೇವೆ ಸಲ್ಲಿಸಿದ್ದರು. ಇಂದು ಪೂಜ್ಯ ತಂದೆಯವರೊಂದಿಗೆ ಆಸ್ಪತ್ರೆಗೆ ತೆರಳಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು.
ನಮ್ಮ ನಾಡಿನ ಧಾರ್ಮಿಕ ,ಶಿಕ್ಷಣ, ಸಾಮಾಜಿಕ ಸೇವೆ, ಸಾಹಿತ್ಯ, ಸಂಸ್ಕೃತಿ ಮತ್ತು ಕೃಷಿ ಕ್ಷೇತ್ರಗಳಿಗೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಗದಗ ಜಿಲ್ಲೆಯ ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಶ್ರೀ ಸಂಗನಬಸವ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿರುವುದು ಅಪಾರ ಭಕ್ತರಿಗೆ ತೀವ್ರ ದುಃಖ ಉಂಟುಮಾಡಿದೆ
ಎಂದು ಸಚಿವ ಸಿ ಸಿ ಪಾಟೀಲ ಹೇಳಿದರು
ಮತ್ತೆ
ಅನೇಕ ಸಂಕಷ್ಟದ ಸಂದರ್ಭಗಳಲ್ಲಿ ಅವರು ನಮಗೆಲ್ಲಾ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು. ಈಗ ಅವರಿಲ್ಲದಿದ್ದರೂ ಅವರು ಹಾಕಿಕೊಟ್ಟ ಮೇಲ್ಪಂಕ್ತಿ, ಆದರ್ಶ, ಮೌಲ್ಯ, ಜೀವನ ಸಿದ್ಧಾಂತಗಳೇ ನಮ್ಮ ಬಾಳಿಗೆ ಬೆಳಕಾಗಬಲ್ಲವು ಎಂದು ನಾನು ನಂಬುತ್ತೇನೆ.
ಶ್ರೀಗಳ ತತ್ವಾದರ್ಶಗಳನ್ನು ನಾವೆಲ್ಲ ನಮ್ಮ ನಡೆನುಡಿಗಳಲ್ಲಿ ಶ್ರದ್ಧೆಯಿಂದ ಪಾಲಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜವಾದ ಶ್ರದ್ಧಾಂಜಲಿ ಎಂದು ನಾನು ಭಾವಿಸುತ್ತೇನೆ.
ಹಾಲಕೆರೆ, ಅನ್ನದಾನೇಶ್ವರ ಮಠ, ಕೊಟ್ಟೂರು ಮಠ, ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ ಮುಂತಾದ ಅನೇಕ ಧಾರ್ಮಿಕ ಕೇಂದ್ರಗಳನ್ನು ಮತ್ತು ಇತರ ಸಾಮಾಜಿಕ ಶೈಕ್ಷಣಿಕ ಸಂಸ್ಥೆಗಳನ್ನು ಬೆಳೆಸಿದ,ನಮ್ಮ ನಡುವಿನ ನಡೆದಾಡುವ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಶ್ರೀಗಳು, ಹಲವಾರು ಮಾದರಿ ಕೃಷಿ ಜಾಗೃತಿ ಚಟುವಟಿಕೆಗಳನ್ನು ನಡೆಸಿ ರೈತಬಂಧು ಎಂದೇ ಖ್ಯಾತರಾಗಿದ್ದರು. ತಮ್ಮ ಜೀವನದುದ್ದಕ್ಕೂ ಬಸವ ತತ್ವವನ್ನು ಆರಾಧಿಸಿ, ಅನುಷ್ಠಾನಗೊಳಿಸುವ ಮೂಲಕ ಅವರು ಅಮರರಾಗಿದ್ದಾರೆ.
ಶ್ರೀಗಳಿಗೆ ನನ್ನ ಅಂತಿಮ ನಮನಗಳು ಮತ್ತು ಅವರ ಅಪಾರ ಭಕ್ತ ಕೋಟಿಗೆ ನನ್ನ ಹೃದಯಪೂರ್ವಕ ಸಾಂತ್ವನಗಳು. ಸಚಿವರು ಸಂತಾಪ ಸೂಚಿಸಿದರು
ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಅವರ ಅಪಾರ ಭಕ್ತಬಳಗ, ಅನುಯಾಯಿಗಳು ಹಾಗೂ ಶಿಷ್ಯವೃಂದಕ್ಕೆ ಈ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸೋಣ
ಪ್ರವೀಣಕುಮಾರ ಮಾಂತಾ
# RSS TIMES