ಲಕ್ನೋ: ದುಷ್ಕರ್ಮಿಗಳು ದೇವಸ್ಥಾನದ ಕಾಂಪೌಂಡ್ನಲ್ಲಿ ಮಾಸದ ತುಂಡುಗಳನ್ನು ಎಸೆದಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು 3 ಮಾಸದ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ರಸೂಲಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದೊಳಗೆ ಮಾಸದ ತುಂಡುಗಳು ಬಿದ್ದಿದ್ದವು. ಇದರಿಂದಾಗಿ ಆಕ್ರೋಶಗೊಂಡ ಜನರು ಅಲ್ಲಿಯೇ ಸಮೀಪವಿರುವ 3 ಮಾಂಸದ ಅಂಗಡಿಗಳಿಗೆ ಬೆಂಕಿ ಹಚ್ಚಿದರು. ಅಷ್ಟೇ ಅಲ್ಲದೇ ಗುಂಪಿನ ಸದಸ್ಯರು ಘಟನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಜೊತೆಗೆ ತಾಲ್ಗ್ರಾಮ್-ಇಂದ್ರಗಢ್ ರಸ್ತೆಯನ್ನು ತಡೆದರು. ಈ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.
ಈ ವೇಳೆ ತಾಲಾಗ್ರಾಮ್ ಪೊಲೀಸರು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದರು. ಇದಾದ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂತೆಗೆದುಕೊಂಡು, ರಸ್ತೆಯನ್ನು ತೆರವುಗೊಳಿಸಿದರು. ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
#RSSTIMES